ಒಳಗೇನಿದೆ!?

ರಾಜ್ಯದಲ್ಲಿ ಉತ್ಪಾದನೆ-ಮಾರಾಟ ಆಗುವ ಎಲ್ಲ ಉತ್ಪನ್ನಗಳ ಮೇಲೆ ಇನ್ನು ಕನ್ನಡದಲ್ಲಿ ಹೆಸರು ಕಡ್ಡಾಯ; ಸರ್ಕಾರದ ಆದೇಶ

ಬೆಂಗಳೂರು: ಕನ್ನಡ ಭಾಷಾ ವಿಚಾರವಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ, ಇದೀಗ ಇನ್ನೊಂದು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಆ ಪ್ರಕಾರ ಇನ್ನುಮುಂದೆ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲೇ ಹೆಸರು ಮುದ್ರಿಸುವುದು ಕಡ್ಡಾಯ ಆಗಿರಲಿದೆ.

ನಾಡಿನ ಭಾಷೆ ಈ ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆ ಆಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ವ್ಯವಹಾರ ಸ್ಥಳೀಯ ಭಾಷೆಯಲ್ಲಿ ಇರಬೇಕು. ಆದ್ದರಿಂದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಸರ್ಕಾರ ಜಾರಿಗೆ ತಂದಿದೆ.

ಹೋಟೆಲ್‌ ಕನ್ನಡ.ಕಾಮ್‌ನಲ್ಲಿ ಜಾಹೀರಾತು ನೀಡಿ ಪ್ರೋತ್ಸಾಹಿಸಿ..

ಈ ಅಧಿನಿಯಮದ ಅನ್ವಯ ಕನ್ನಡಕ್ಕೆ ಮಹತ್ವ ಒದಗಿಸಲು ಕ್ರಮಕೈಗೊಂಡಿರುವ ಸರ್ಕಾರ, ರಾಜ್ಯದಲ್ಲಿ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಇತರ ಭಾಷೆ ಜತೆಗೆ ಕನ್ನಡದಲ್ಲೂ ಇರಬೇಕು ಎಂದು ಆದೇಶ ಹೊರಡಿಸಿದೆ.

ಅಲ್ಲದೆ ಈ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಮೇಲ್ವಿಚಾರಣೆ ನಡೆಸಲು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಕೆ.ಉಮಾದೇವಿ ಅವರು ಆದೇಶಿಸಿದ್ದಾರೆ.

ಇದೂ ಓದಿ: ಹೋಟೆಲ್‌ ಕ್ಷೇತ್ರಕ್ಕಾಗಿ ʼಬಿಎಚ್‌ಎ ಫುಡ್‌ ಅವಾರ್ಡ್ಸ್-2025ʼ:‌ ನಾಮನಿರ್ದೇಶನ ಸಲ್ಲಿಸಲು ಇಲ್ಲಿದೆ ವಿವರ, ಅವಕಾಶ..

ಇದೂ ಓದಿ:ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ; ಆರೋಗ್ಯ ಸಚಿವರ ಹೇಳಿಕೆ ಬೆನ್ನಿಗೇ ಬೆಂಗಳೂರು ಹೋಟೆಲುಗಳ ಸಂಘದಿಂದ ಸ್ಪಷ್ಟನೆ

ಇದೂ ಓದಿ:ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ